ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.

ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm