ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm