ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm