ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm