ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm