ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm