ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.

ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm