ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm