ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.

ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm