ಬ್ರೇಕಿಂಗ್ ನ್ಯೂಸ್
07-09-21 11:45 am Headline Karnataka News Network ಕರ್ನಾಟಕ
ಮೈಸೂರು, ಸೆ.7 : ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತೆ. ಅದರ ಬಗ್ಗೆ ಈಗಲೇ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಉನ್ನತ ಶಿಕ್ಷಣ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಯಾರು ನಾಯಕ ಸ್ಥಾನದಲ್ಲಿ ಇರುತ್ತಾರೋ ಅವರ ಮುಂದಾಳತ್ವದಲ್ಲಿ ಎಲ್ಲ ನಡೆದುಕೊಂಡು ಹೋಗುತ್ತೆ. ಈಗ ಬೊಮ್ಮಾಯಿ ಸಿಎಂ ಇದ್ದಾರೆ, ಅಧ್ಯಕ್ಷರು ಕಟೀಲ್ ಇದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷ ನಡೆಯುತ್ತಿದೆ. ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅದರ ಚರ್ಚೆ ಈಗ ಬೇಡ ಎನ್ನುವ ಮೂಲಕ ಸಚಿವ ಅಶ್ವತ್ಥ ನಾರಾಯಣ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದ್ದಾರೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಷಾ, ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುವ ಮೂಲಕ ನಾಯಕ ಮಣಿಗಳ ತಲೆಗೆ ಹುಳ ಬಿಟ್ಟಿದ್ದರು.


ರಾಷ್ಟ್ರೀಯ ಶಿಕ್ಷಣ ನೀತಿಗೆ ಜಾರಿ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಎನ್ಇಪಿ ಪ್ರಸಕ್ತ ಸಾಲಿನಿಂದಲೇ ಜಾರಿಯಾಗಲಿದೆ. ಈ ನೀತಿ ಸಂಪೂರ್ಣ ಅನುಷ್ಠಾನಕ್ಕೆ 15 ವರ್ಷ ಕಾಲಾವಕಾಶ ಇದೆ. ಈ ಬಗ್ಗೆ ಏಳೆಂಟು ವರ್ಷದಿಂದಲೇ ಚರ್ಚೆಯಲ್ಲಿದೆ. ಹಾಗಾಗಿ ಮತ್ತೆ ಅಭಿಪ್ರಾಯ ಸಂಗ್ರಹ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಠಿ ಮಾಡ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಹಿಂದುಳಿದ ವರ್ಗ ಸೇರಿ ಎಲ್ಲರ ಅಭಿವೃದ್ಧಿ ಸಾಧ್ಯ ಇದೆ. ಕಾಂಗ್ರೆಸ್ ಗೆ ಯಾವುದೇ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿಯೇ ಅವರು ಅನಗತ್ಯ ಹೊಂದಲ ಸೃಷ್ಠಿ ಮಾಡಿ ವಿರೋಧ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಆಫ್ಗನ್ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ವಿಚಾರವನ್ನು ವಿದೇಶಾಂಗ ಇಲಾಖೆ, ಅದರ ಸಚಿವರು ನೋಡಿಕೊಳ್ತಾರೆ. ವೀಸಾ ಅವಧಿ ಮುಗಿದವರು ಅರ್ಜಿ ಹಾಕಿಕೊಳ್ಳಲಿ. ಅದನ್ನು ವಿದೇಶಾಂಗ ಇಲಾಖೆಯವರು ಪರಿಶೀಲನೆ ಮಾಡ್ತಾರೆ. ನಾವು ಯಾರಿಗೂ ತಿಂಗಳ ಅವಧಿಗೆ ವೀಸಾ ಕೊಡೋದಿಲ್ಲ. ಶೈಕ್ಷಣಿಕ ಅವಧಿಗೆ ಅಂತ ವೀಸಾ ಪಡೆದುಕೊಂಡಿರುತ್ತಾರೆ. ಇದರಲ್ಲಿ ನಾವು ತಲೆ ತೂರಿಸುವ ಪ್ರಮೇಯ ಇಲ್ಲ ಎಂದು ಹೇಳಿದರು.
The party will decide on the next election DCM Dr Ashwaththa Narayana.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm