ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
27-02-25 05:50 pm
HK News Desk
Forest Fire, Kanakapura, Bangalore: ಒಣಹುಲ್ಲು...
27-02-25 05:48 pm
ಕುಂಭಮೇಳಕ್ಕೆ ಹೋಗಿರೋದು ತಪ್ಪಾದ್ರೆ ಡಿಕೆಶಿ ಅವರನ್ನು...
27-02-25 03:28 pm
DK Shivakumar, BJP, Amit Shah, congress: ಡಿಕೆ...
27-02-25 01:46 pm
ಸಿಎಂಗೆ ಕ್ಲೀನ್ ಚಿಟ್ ಕೊಟ್ಟರೂ, ಮುಡಾ ಹಗರಣದ ಬಗ್ಗೆ...
26-02-25 10:43 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
27-02-25 11:07 pm
Mangalore Correspondent
Kotekar Robbey case, Bhaskar Belchada, Saheb...
27-02-25 10:48 pm
Talat Gang Mangalore, Ankola Robbery case: ಅಂ...
27-02-25 10:31 pm
Mangalore News; ನಿವೃತ್ತ ಸರಕಾರಿ ನೌಕರರಿಗೆ 7ನೇ ವ...
27-02-25 10:09 pm
Yeddyurappas, Ravindra shetty, Mangalore: ಬಿಎ...
27-02-25 07:09 pm
26-02-25 10:48 pm
HK News Desk
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm