ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm