ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
06-03-26 03:50 pm
HK News Staffer
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 04:08 pm
HK News Staffer
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm