ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm