ಬ್ರೇಕಿಂಗ್ ನ್ಯೂಸ್
10-09-21 10:35 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.10 : ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕಾಗಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನು ಬೇಕಾದರೂ ಮಾಡುತ್ತದೆ. ಆದರೆ ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದ್ದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.
ಈ ಮುನ್ನ ಸೆ.6ರಂದು ಟ್ವೀಟ್ ಮಾಡಿದ್ದ ಚೇತನ್, ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗ ರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನ್ನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.
Actor Chetan makes controversial statement about congress and BJP.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm