ಸೆ.15ರ ವರೆಗೂ ಮಳೆ ಸಾಧ್ಯತೆ ; ದ.ಕ. ಜಿಲ್ಲೆ ಸೇರಿ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಎಲರ್ಟ್

11-09-21 12:17 pm       Headline Karnataka News Network   ಕರ್ನಾಟಕ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸೆ.15ರ ವರೆಗೂ ಮಳೆಯಾಗಲಿದೆ.

ಬೆಂಗಳೂರು, ಸೆ.11: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸೆ.15ರ ವರೆಗೂ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರಾವಳಿ ಮತ್ತು ಮಧ್ಯ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಯೆಲ್ಲೋ ಎಲರ್ಟ್ ಘೋಷಿಸಲಾಗಿದೆ. 

ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿಯೂ ಮಳೆಯಾಗಲಿದ್ದು, ಅಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಛತ್ತೀಸ್​ಗಢ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

Heavy Rain Alert Across Karnataka Yellow Alert Announced in 7 Districts.