ಬ್ರೇಕಿಂಗ್ ನ್ಯೂಸ್
08-09-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 8: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೊರೋನ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತೀರ್ಮಾನಿಸಲಾಯಿತು.
ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೋನ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.
ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm