ಬ್ರೇಕಿಂಗ್ ನ್ಯೂಸ್
08-09-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 8: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೊರೋನ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತೀರ್ಮಾನಿಸಲಾಯಿತು.

ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೋನ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm