ಬ್ರೇಕಿಂಗ್ ನ್ಯೂಸ್
08-09-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 8: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೊರೋನ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತೀರ್ಮಾನಿಸಲಾಯಿತು.

ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೋನ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm