ಬ್ರೇಕಿಂಗ್ ನ್ಯೂಸ್
08-09-20 05:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 8: ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕೊರೋನ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ತೀರ್ಮಾನಿಸಲಾಯಿತು.

ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೋನ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು. ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯ ಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm