ಬ್ರೇಕಿಂಗ್ ನ್ಯೂಸ್
11-09-21 09:14 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.11: ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಷಯವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿ ರಾಜ್ಯ ಸರಕಾರವು ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು ಎಂದು ಮಾಜಿ ಸಿಎಂ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನ್ಯಾಯಾಲಯದ ಆದೇಶವಿದ್ದರೂ ಅದನ್ನು ತರಾತುರಿಯಲ್ಲಿ ಅನುಷ್ಠಾನಿಸುವ ಮುನ್ನ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು. ಹಿಂದು ಧರ್ಮದ ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವದ ರಕ್ಷಣೆಯ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ದೇವಸ್ಥಾನ ಕೆಡವಿ ಹಾಕಿದ ಘಟನೆಯ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ ನಡೆಸಿ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೊಸ ನಿವೇಶನವನ್ನು ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ಹೊಸ ದೇವಸ್ಥಾನವನ್ನು ಕಟ್ಟಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು ಇಂತಹ ನಿರ್ಧಾರ ಕೈಗೊಳ್ಳುವ ಮೊದಲು @BJP4Karnataka ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು.
— Siddaramaiah (@siddaramaiah) September 11, 2021
1/5 pic.twitter.com/809YTvCLha
ನಂಜನಗೂಡಿನಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಹಳೆಯ ದೇವಸ್ಥಾನ ಒಂದನ್ನು ಅಧಿಕಾರಿಗಳು ಸ್ಥಳೀಯರ ವಿರೋಧದ ಮಧ್ಯೆಯೇ ಇಂದು ನೆಲಸಮ ಮಾಡಿದ್ದರು. ಈ ಬಗ್ಗೆ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ, ಸ್ಥಳೀಯ ಶಾಸಕರಾದಿಯಾಗಿ ಬಿಜೆಪಿ ನಾಯಕರು ಸರಕಾರದ ಕ್ರಮವನ್ನು ಸಮರ್ಥಿಸಿದ್ದರು. ಆದರೆ, ಘಟನೆಯನ್ನು ಖಂಡಿಸಿರುವ ಸಿದ್ದರಾಮಯ್ಯ ದೇವಸ್ಥಾನ ಕೆಡವಿದ ವಿಡಿಯೋ ಜೊತೆಗೆ ಟ್ವೀಟ್ ಮಾಡಿ ಜನರ ಗಮನ ಸೆಳೆದಿದ್ದಾರೆ.
ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ @BJP4Karnataka ಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?
— Siddaramaiah (@siddaramaiah) September 11, 2021
3/5 pic.twitter.com/91pFoEykPj
Former Karnataka Chief Minister Siddaramaiah on Saturday condemned the demolition of an 'ancient' Hindu temple at Nanjangud in Mysuru district and said the BJP government should have consulted the local residents before taking such an action 'which has hurt the religious sentiments of the people".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm