ಬ್ರೇಕಿಂಗ್ ನ್ಯೂಸ್
12-09-21 10:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಸೆ 12 : ಜೀಪ್ - ಕ್ಯಾಂಟರ್ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.
ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದಾರೆ. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.
ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣದಲ್ಲಿ ಜೀಪ್ ಚಾಲಕ ರಮೇಶ್ (40), ಮುನಿರತ್ನಮ್ಮ (55), ನಾರಾಯಣಸ್ವಾಮಿ (55) ಸೇರಿದಂತೆ 8 ಜನರ ಸಾವು ಸಂಭವಿಸಿದೆ. ನಿಖಿಲ್, ವೆಂಕಟಲಕ್ಷ್ಮೀ, ಯಶೋಧಮ್ಮ, ಸತ್ಯಪ್ಪ, ಮುನಿಸ್ವಾಮಿ, ಮಂಜುನಾಥ, ಅಂಬರೀಶ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Eight people die on spot after Truck Jeep accident at Chikkaballapur.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm