ಬ್ರೇಕಿಂಗ್ ನ್ಯೂಸ್
12-09-21 10:32 pm Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ, ಸೆ 12 : ಜೀಪ್ - ಕ್ಯಾಂಟರ್ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ.
ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದಾರೆ. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.
ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಪ್ರಕರಣದಲ್ಲಿ ಜೀಪ್ ಚಾಲಕ ರಮೇಶ್ (40), ಮುನಿರತ್ನಮ್ಮ (55), ನಾರಾಯಣಸ್ವಾಮಿ (55) ಸೇರಿದಂತೆ 8 ಜನರ ಸಾವು ಸಂಭವಿಸಿದೆ. ನಿಖಿಲ್, ವೆಂಕಟಲಕ್ಷ್ಮೀ, ಯಶೋಧಮ್ಮ, ಸತ್ಯಪ್ಪ, ಮುನಿಸ್ವಾಮಿ, ಮಂಜುನಾಥ, ಅಂಬರೀಶ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Eight people die on spot after Truck Jeep accident at Chikkaballapur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm