ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm