ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm