ಬ್ರೇಕಿಂಗ್ ನ್ಯೂಸ್
14-09-21 04:36 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.14: ಬಾಯಲ್ಲಿ ಹಿಂದೂ ಹಿಂದೂ ಅಂತಾರೆ, ಈಗ ಹಿಂದುಗಳ ದೇವಸ್ಥಾನಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಂದನ್ನು ಕೆಡವಿದ ಅಲ್ಲಿನ ಜಿಲ್ಲಾಡಳಿತ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿರುವಾಗಲೇ ವಿರೋಧ ಪಕ್ಷಗಳ ಮುಖಂಡರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಜೆಡಿಎಸ್ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್.ಡಿ.ರೇವಣ್ಣ, ಕೆಲವರು ಜೆಡಿಎಸ್ ಮುಳುಗುವ ದೋಣಿ ಎನ್ನುತ್ತಿದ್ದರು. ಮುಳುಗುವಾಗ ಹೇಗೆ ಮೇಲೆತ್ತುವುದು ಎನ್ನುವುದೂ ಗೊತ್ತಿದೆ. ಸಮುದ್ರದಲ್ಲಿ ಮುಳುಗೇಳುವ ಸಬ್ಮೆರಿನ್ ಮೆಷಿನ್ ನಮ್ಮ ಬಳಿ ಇದೆ. ಯಾವಾಗ ಹಡಗು ಮೇಲೆತ್ತಬೇಕು, ಯಾವಾಗ ಮುಳುಗಿಸಬೇಕು ಎಂದು ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಸಬ್ಮೆರಿನ್ ಯಂತ್ರ ರಿಪೇರಿ ಮಾಡಿದ್ದೇವೆ. ದೇವೇಗೌಡರು, ಕುಮಾರಸ್ವಾಮಿ ಅದನ್ನು ನೋಡಿಕೊಳ್ಳುತ್ತಾರೆ. ಕಲಬುರಗಿ ಪಾಲಿಕೆ ಬಗ್ಗೆ ಖರ್ಗೆ ಮಾತನಾಡಿದ್ದಾರೆ. ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಇಲ್ಲದೆ ಅಧಿಕಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜೆಡಿಎಸ್ ಅನ್ನು ಅವಲಂಬಿಸಿವೆ. ಅತ್ತ ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿರುವ ಜೆಡಿಎಸ್, ಯಾವ ಪಕ್ಷದೊಂದಿಗೆ ಕೈ ಜೋಡಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ರೇವಣ್ಣ, ಮುಳುಗಿದ ಹಡಗಿನ ಜೊತೆ ಏಕೆ ಬರ್ತೀರಾ? ಮುಳುಗುವ ಹಡಗಿನ ಜತೆ ಸೇರಿ ನಿಮ್ಮ ಸ್ಥಾನಕ್ಕೆ ಕುತ್ತು ತಂದುಕೊಳ್ಳಬೇಡಿ. ಇದರಿಂದ ಬೊಮ್ಮಾಯಿ ಅವರ ಸೀಟಿಗೆ ಕುತ್ತು ಬರುವುದು ಬೇಡ ಎಂದು ಲೇವಡಿ ಮಾಡಿದ್ದರು.
JDS Leader HD Revanna slams state BJP Govt over Temple Demolition Controversy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm