ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್ಎಸ್ಎಲ್ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.
ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm