ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್ಎಸ್ಎಲ್ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.




ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm