ಬ್ರೇಕಿಂಗ್ ನ್ಯೂಸ್
17-09-21 11:35 am Headline Karnataka News Network ಕರ್ನಾಟಕ
ಬೆಂಗಳೂರು, ಸೆ.17: ಪಿಯುಸಿ ಓದುತ್ತಿದ್ದ ಹುಡುಗನೊಬ್ಬ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ.
ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಆರ್ಮಿ ಸ್ಕೂಲ್ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ವ್ಯಕ್ತಿಯ 6 ಅಡಿ ಅಂತರದಲ್ಲಿ ಬಿದ್ದಿದೆ. ನಿವೃತ್ತ ಹವಾಲ್ದಾರ್ ಆಗಿರುವ ತಂದೆಯ ಲೈಸೆನ್ಸ್ ಇರುವ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ರಾಹುಲ್ ಎಸ್ಎಸ್ಎಲ್ಸಿಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ.
ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ. ಬೆಳಗ್ಗೆ 4 ಗಂಟೆಗೆ ಎದ್ದು ಓದಿಕೊಂಡಿದ್ದ. ಇದರ ನಡುವೆ ಮನೆಯಿಂದ ಹೊರಗೆ ಬಂದು ವಾಕಿಂಗ್ ಮಾಡುತ್ತಿದ್ದ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್ಗೆ ಬರುತ್ತಿದ್ದ. ಆದರೆ ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ ಎಂದು ಮನೆಯವರು ತಿಳಿಸಿದ್ದಾರೆ.




ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ಇದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ.
ವಿದ್ಯಾರ್ಥಿ ರಾಹುಲ್, ಭಗತ್ ಸಿಂಗ್ ಹಾಗೂ ಬಾಬ್ನಾ ದಂಪತಿಯ ಪುತ್ರನಾಗಿದ್ದು, ಭಗತ್ ಸಿಂಗ್ ಅವರು ಸೇನೆಯ ನಿವೃತ್ತ ಹವಾಲ್ದಾರ್ ಆಗಿದ್ದಾರೆ. ಉತ್ತರಾಖಂಡ್ ಮೂಲದವರಾದ ಭಗತ್ ಸಿಂಗ್, ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಆರ್.ಟಿ.ನಗರದ ಗಂಗಾ ಬೇಕರಿ ಬಳಿ ಮನೆ ಮಾಡಿಕೊಂಡು ವಾಸವಾಗಿದ್ದಾರೆ.
2nd puc student suicide by shooting Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm