ಬ್ರೇಕಿಂಗ್ ನ್ಯೂಸ್
19-09-21 03:13 pm Headline Karnataka News Network ಕರ್ನಾಟಕ
ದಾವಣಗೆರೆ, ಸೆ.19: ಈ ಬಾರಿ ಯಾರು ಕೂಡ ವಿಪಕ್ಷಗಳನ್ನ ಹಗುರವಾಗಿ ತಗೋಬೇಡಿ. ಕಾಂಗ್ರೆಸಿನವರು ಕೂಡ ಎದ್ದು ಕುಳಿತಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರನ್ನು ಸಂಪರ್ಕಿಸುತ್ತಿದ್ದಾರೆ. ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷವೂ ಬಲಗೊಳ್ಳಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ. ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಬೇಕಿದೆ. ಅದಕ್ಕಾಗಿ ತಳಮಟ್ಟದಿಂದಲೇ ಕೆಲಸ ಆಗಬೇಕಾಗಿದೆ. ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ಮತಗಳನ್ನು ಸೆಳೆಯಲು ಅವರ ನಾಯಕರನ್ನು ನಮ್ಮಲ್ಲಿಗೆ ತರಬೇಕಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 141 ಸೀಟನ್ನು ನಾವು ಗೆಲ್ಲಬೇಕಿದೆ. ಇದೇನು ಕಷ್ಟವಲ್ಲ. ಹಾಗೆಂದು ಕೇವಲ ಮೋದಿಯನ್ನು ನಂಬಿ ಕೂತರೆ ಆಗುವುದಿಲ್ಲ. ಎಲ್ಲ ಚುನಾವಣೆಗಳಲ್ಲಿ ಮೋದಿ ಅಲೆ ಕೆಲಸ ಮಾಡಲ್ಲ ಎಂದು ಹೇಳಿದರು.

ಕಳೆದ 15 ದಿನಗಳಲ್ಲಿ ನಮ್ಮ ಶಾಸಕರನ್ನು ಸಂಪರ್ಕಿಸಲು ಡಿಕೆಶಿ ಯತ್ನಿಸುತ್ತಿದ್ದಾರೆ. ಒಂದಿಬ್ಬರು ಶಾಸಕರನ್ನು ಸಂಪರ್ಕ ಮಾಡಿದ್ದಾರೆ ಅನ್ನೋದು ಗೊತ್ತು. ಡಿಕೆಶಿ ತಮ್ಮ ಪಕ್ಷವನ್ನು ಬಲಪಡಿಸಲು ಇಂತಹ ಪ್ರಯತ್ನ ಮಾಡಿದ್ದಾರೆ. ಆದರೆ ಯಾರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಹೋಗಲ್ಲ ಎನ್ನುವುದನ್ನು ನಂಬುತ್ತೇನೆ. ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ಗೆ ಹೋಗಲ್ಲ. ಬದಲಿಗೆ, ಅನೇಕ ಕಾಂಗ್ರೆಸ್ ಶಾಸಕರೇ ಬಿಜೆಪಿಗೆ ಬರ್ತಾರೆ ಎಂದು ಹೇಳಿದರು.

ದೇಗುಲ ತೆರವು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ , ರಾಜ್ಯದಲ್ಲಿ ಯಾವುದೇ ಕಾರಣಕ್ಕು ಮುಂದಕ್ಕೆ ದೇಗುಲ ತೆರವು ಮಾಡಲ್ಲ. ಈ ಬಗ್ಗೆ ನಾವು ಸುಪ್ರೀಂ ಕೋರ್ಟಿಗೆ ಮೇಲ್ಮನವಿಯನ್ನೂ ಸಲ್ಲಿಸುತ್ತೇವೆ. ದೇಗುಲ ತೆರವು ಆದೇಶದ ಬಗ್ಗೆ ಸುಪ್ರೀಂಗೆ ಮನವಿ ಮಾಡುತ್ತೇವೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇಗುಲ ಒಡೆದಿರುವ ಕೆಲಸ ಅಧಿಕಾರಿಗಳ ಎಡವಟ್ಟಿನಿಂದ ಆಗಿದೆ. ಇದರ ಬಗ್ಗೆ ಯಾವ ಕ್ರಮ ಆಗಬೇಕೋ ಅದನ್ನು ಮಾಡುತ್ತೇವೆ. ಯಾರು ತಪ್ಪು ಮಾಡಿದ್ದಾರೋ, ಅವರಿಗೆ ಶಿಕ್ಷೆ ನೀಡುತ್ತೇವೆ ಎಂದು ಹೇಳಿದರು.
Don't take Silly as Opposition Party BS Yediyurappa Advices to Party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm