ಬ್ರೇಕಿಂಗ್ ನ್ಯೂಸ್
20-09-21 11:35 am Headline Karnataka News Network ಕರ್ನಾಟಕ
ದಾವಣಗೆರೆ, ಸೆ. 20; ನಿಜಕ್ಕೂ ವಿಧಿ ಎಂತಾ ಘೋರ. ಇನ್ನು ಬದುಕಿ ಬಾಳಬೇಕಿದ್ದ 8 ವರ್ಷದ ಬಾಲಕನ ಕಥೆ ಮುಗಿದಿದೆ. ಆತನ ಜೊತೆಗೆ ತಂದೆ ತಾಯಿಯೂ ಸಾವಿನಲ್ಲಿ ಜೊತೆಯಾಗಿದ್ದಾರೆ. ಇಂಥದ್ದೊಂದು ಹೃದಯವಿದ್ರಾವಕ ಘಟನೆಗೆ ಬೆಣ್ಣೆನಗರಿ ದಾವಣಗೆರೆ ಸಾಕ್ಷಿಯಾಗಿದೆ.
ಅದು ಪುಟ್ಟ ಕುಟುಂಬ. ಗಂಡ, ಹೆಂಡತಿ, ಮಗು ವಾಸವಾಗಿದ್ದರು. ಆರ್ಥಿಕವಾಗಿ ಮೇಲ್ನೋಟಕ್ಕೆ ಚೆನ್ನಾಗಿದ್ದರು ಎಂದುಕೊಂಡರೂ ಸಾವಿಗೆ ಇನ್ನು ಸ್ಪಷ್ಟ ಕಾರಣ ಸಿಕ್ಕಿಲ್ಲ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರಿಂದಲೇ ಸಾವಿಗೆ ಶರಣಾಗಿರಬಹುದು ಎಂಬುದು ಪ್ರಾಥಮಿಕವಾಗಿ ಸಿಕ್ಕಿರುವ ಮಾಹಿತಿ.
ಅಂದ ಹಾಗೆ ಈ ಹೃದಯವಿದ್ರಾವಕ ಘಟನೆ ನಡೆದಿರುವುದು ದಾವಣಗೆರೆ ಭಾರತ್ ಕಾಲೋನಿಯ ಶೇಖರಪ್ಪ 'ಬಿ' ಬ್ಲಾಕ್ ನಲ್ಲಿ. ಕೃಷ್ಣಾನಾಯ್ಕ್ ಕುಟುಂಬದ ಮೂವರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
48 ವರ್ಷದ ಕೃಷ್ಣಾನಾಯ್ಕ್, 35 ವರ್ಷದ ಆತನ ಪತ್ನಿ ಸರಸ್ವತಿ ಬಾಯಿ, 8 ವರ್ಷದ ಮಗು ಧ್ರುವ ಮೃತಪಟ್ಟವರು ಎಂದು ತಿಳಿದು ಬಂದಿದೆ. ಭಾರತ್ ಕಾಲೋನಿ ಶೇಖರಪ್ಪ 'ಬಿ' ಬ್ಲಾಕನಲ್ಲಿ ವಾಸವಾಗಿದ್ದ ಕೃಷ್ಣನಾಯ್ಕ್ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
ಸರಸ್ವತಿ ಬಾಯಿ ಮೂಲವ್ಯಾಧಿಯಿಂದ ಬಳಲುತ್ತಿದ್ದರೆ, ಕೃಷ್ಣಾನಾಯ್ಕ್ರಿಗೆ ಸಹ ಆರೋಗ್ಯ ಸಮಸ್ಯೆ ಇತ್ತು. ಕೃಷ್ಣನಾಯ್ಕ್ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದರು. ಆರೋಗ್ಯದಲ್ಲಿ ಉಂಟಾಗುತ್ತಿದ್ದ ಏರುಪೇರಿನಿಂದಾಗಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಹೇಳಲಾಗುತ್ತಿದೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಬೇಸತ್ತಿದ್ದ ದಂಪತಿ ಆಸ್ಪತ್ರೆಗೆ ತೋರಿಸಿದ್ದರೂ ಸಂಪೂರ್ಣ ಗುಣಮುಖರಾಗಿರಲಿಲ್ಲ ಎನ್ನಲಾಗಿದೆ. ನ್ಯೂ ಡೆಲ್ಲಿ ಪಬ್ಲಿಕ್ ಸ್ಕೂಲ್ನಲ್ಲಿ ಓದುತ್ತಿದ್ದ ಧ್ರುವ ಎಂಬ ಬಾಲಕ ಮೃತಪಟ್ಟಿದ್ದು, ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕೃಷ್ಣಾನಾಯ್ಕ್ ಶವ ಪತ್ತೆಯಾಗಿದ್ದರೆ, ಸರಸ್ವತಿ ಬಾಯಿ ಹಾಗೂ ಮಗು ಧ್ರುವ ಮಲಗಿದ ಸ್ಥಿತಿಯಲ್ಲೇ ಪತ್ತೆಯಾಗಿದ್ದಾರೆ.
ಮನೆ ಕಡೆ ಆರ್ಥಿಕವಾಗಿ ಚೆನ್ನಾಗಿದ್ದರೂ ಆರೋಗ್ಯ ಕೈಕೊಟ್ಟ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರ್. ಎಂ. ಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಅವರ ಅಕ್ರಂದನ ಮುಗಿಲು ಮುಟ್ಟಿದೆ. ಏನು ಅರಿಯದ ಎಂಟು ವರ್ಷದ ಕಂದಮ್ಮನೂ ಬಲಿಯಾಗಿದ್ದು ವಿಪರ್ಯಾಸವೇ ಸರಿ.
Davanagere eight-year-old boy including his parents commits suicide at home due to health issues. It is said both parents were depressed by health issues and that's the reason they have taken this extreme step.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am