ಬ್ರೇಕಿಂಗ್ ನ್ಯೂಸ್
20-09-21 11:56 am Headline Karnataka News Network ಕರ್ನಾಟಕ
ಬೆಂಗಳೂರು, ಸೆ. 20: ರಾಜ್ಯ ದ್ವಿತೀಯು ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಖಾಸಗಿ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿ ಅಭ್ಯರ್ಥಿಗಳ ಫಲಿತಾಂಶ ಹೊರ ಬಿದ್ದಿದೆ.
ಒಟ್ಟು 18,414 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಫ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.
ಇಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಅಭ್ಯರ್ಥಿಗಳು http://karresults.nic.in ಲಿಂಕ್ ಮೂಲಕ ಫಲಿತಾಂಶ ನೋಡಬಹುದು. ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಎಂದು ಹೇಳಲಾಗಿತ್ತು.
ಕೇರಳದ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿತ್ತು.. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೇ ಪರೀಕ್ಷೆ ಬರೆಯಬಹುದು. ಪರೀಕ್ಷೆ ಕೇಂದ್ರದ ಆಚೆ ಎಲ್ಲರಿಗೂ ಆರೋಗ್ಯ ತಪಾಸಣೆ ಇರಲಿದೆ ಎಂದು ಪಿಯು ಬೋರ್ಡ್ ತಿಳಿಸಿತ್ತು.ಇಂದು ಇದರ ಫಲಿತಾಂಶ ಹೊರ ಬಿದ್ದಿದೆ.
ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ. 18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಂದು 2020-21ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ.ಕ್ಷೆ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ.
ಇಂದು ಮಧ್ಯಾಹ್ನ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸುದ್ದಿಗೋಷ್ಠಿ ನಡೆಸುತ್ತಾರೆ. ಸುದ್ದಿಗೋಷ್ಠಿ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. kea.kar.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ.
The Karnataka 2nd PUC exam result has been released today at 10.30 am. The exam result is available on karresults.nic.in. The result has been declared for the PUC supplementary exam held in August-September 2021.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm