ಬ್ರೇಕಿಂಗ್ ನ್ಯೂಸ್
20-09-21 01:36 pm Headline Karnataka News Network ಕರ್ನಾಟಕ
Photo credits : thebengalurulive.com
ಬೆಂಗಳೂರು, ಸೆ.20: ಪಾಕಿಸ್ಥಾನದ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ನಡೆಸುತ್ತಿದ್ದಾರೆ ಎಂಬ ಗುಪ್ತಚರ ವರದಿಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಪಾಕಿಸ್ಥಾನದ ಐಎಸ್ಐ ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದ ಶಂಕೆಯಲ್ಲಿ ರಾಜಸ್ಥಾನಿ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಕ್ಷಣಾ ಇಲಾಖೆಗೆ ಸಂಬಂಧಪಟ್ಟ ಕಚೇರಿಗಳ ಫೋಟೋ, ವಿಡಿಯೋಗಳನ್ನು ಪಾಕಿಸ್ಥಾನದ ಐಎಸ್ಐ ಏಜಂಟರಿಗೆ ರವಾನೆ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ನಿವಾಸಿಯಾಗಿರುವ ಜಿತೇಂದ್ರ ಸಿಂಗ್ ಎಂಬಾತ ಬಂಧಿತನಾಗಿದ್ದು, ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ಪಾಕಿಸ್ಥಾನದ ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದ ಎಂದು ಶಂಕಿಸಲಾಗಿದೆ.
ಈ ಬಗ್ಗೆ ಮಾಹಿತಿ ದೊರೆತ ಬೆಂಗಳೂರಿನಲ್ಲಿರುವ ಮಿಲಿಟರಿ ವಿಭಾಗದ ಗುಪ್ತಚರ ಅಧಿಕಾರಿಗಳು ಬೆಂಗಳೂರಿನ ಸಿಸಿಬಿ ಪೊಲೀಸರ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಕಾಟನ್ ಪೇಟೆಯಿಂದ ಬಂಧಿಸಿದ್ದಾರೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿರುವ ಆರ್ಮಿ ಪೋಸ್ಟ್ ಮತ್ತು ಅಲ್ಲಿನ ಅಧಿಕಾರಿಗಳು, ಮಿಲಿಟರಿ ವಾಹನಗಳ ಬಗ್ಗೆ ಈತ ಪಾಕಿಸ್ಥಾನದ ಅಧಿಕಾರಿಗಳಿಗೆ ಮಾಹಿತಿ ರವಾನಿಸುತ್ತಿದ್ದ. ವಾಟ್ಸಪ್ ಕರೆ, ಮೆಸೇಜ್ ಮೂಲಕ ಪಾಕಿಸ್ಥಾನದ ಐಎಸ್ಐ ಅಧಿಕಾರಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಭಾರತದ ಮಿಲಿಟರಿ ಅಧಿಕಾರಿಗಳು ಬಳಕೆ ಮಾಡುವ ಬಟ್ಟೆಯನ್ನು ತೊಡುತ್ತಿದ್ದ ಜಿತೇಂದ್ರ ಸಿಂಗ್, ತಾನೊಬ್ಬ ಮಿಲಿಟರಿ ಕ್ಯಾಪ್ಟನ್ ಎನ್ನುವ ಸೋಗು ಹಾಕ್ಕೊಂಡಿದ್ದ. ಆತನ ಬಳಿಯಿದ್ದ ಮಿಲಿಟರಿ ಧಿರಿಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆಯ ಜೋಲಿ ಮಹಲ್ಲಾ ಎಂಬಲ್ಲಿ ವಾಸವಿದ್ದ. ಈತ ಬಾರ್ಮರ್ ಮಿಲಿಟರಿ ಪೋಸ್ಟ್ ಬಗ್ಗೆ ಮಾಹಿತಿಗಳನ್ನು ರವಾನಿಸುತ್ತಿದ್ದ. ಅದರ ಜೊತೆಗೆ, ಬೆಂಗಳೂರಿನ ಮಿಲಿಟರಿ ವಿಭಾಗ ಮತ್ತು ಇನ್ನಿತರ ರಕ್ಷಣಾ ಇಲಾಖೆಗೆ ಸಂಬಂಧಪಟ್ಟ ಮಾಹಿತಿಗಳನ್ನು ರವಾಸುತ್ತಿದ್ದನೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sources in the Bengaluru police said the suspect, Jitender Singh, is a resident of Barmer, Rajasthan and was working as a garment seller in Bengaluru. He was in communication with a Pakistan-based ISI officer over WhatsApp messages as well as WhatsApp audio and video calls. He had shared photos and details of the Army area and carried out reconnaissance of Army posts near the international border at the behest of his ISI handler.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm