ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.

ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm