ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.

ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm