ಬ್ರೇಕಿಂಗ್ ನ್ಯೂಸ್
22-09-21 12:19 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಜಿಲ್ಲೆಯ ಶಾಸಕ ಸಾ.ರಾ. ಮಹೇಶ್ ನಡುವಿನ ಸಮರದ ಪ್ರತಿಧ್ವನಿ ವಿಧಾನಸಭೆಯಲ್ಲಿ ಕೇಳಿಬಂತು. ಸಾರಾ ಮಹೇಶ್ ಪ್ರಶ್ನೆಗೆ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಸರ್ಕಾರದ ಅಧಿಕಾರಿಗಳು ಅಧಿಕಾರಿಗಳಾಗಿಯೇ ಕೆಲಸ ಮಾಡಬೇಕೆ ಹೊರತು ಸರ್ವಾಧಿಕಾರಿಗಳಾಗಬಾರದು. ಇದನ್ನು ಸರಕಾರ ಸಹಿಸುವುದಿಲ್ಲ ಎಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸಭೆಯ ಶೂನ್ಯವೇಳೆಯಲ್ಲಿ ಶಾಸಕ ಸಾ.ರಾ. ಮಹೇಶ್ ಮಂಡಿಸಿದ್ದ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಚಿವರು, ಈ ವಿಚಾರದಲ್ಲಿ ಸರ್ಕಾರ ಅಂದಿನ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ತಿಳಿಸಿದರು.
ಅಧಿಕಾರಿ ತನ್ನ ವ್ಯಾಪ್ತಿ ಮೀರಿ ವರ್ತನೆ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗುತ್ತದೆ. ಕಾನೂನು ಉಲ್ಲಂಘನೆಯನ್ನು ಯಾರೇ ಮಾಡಿದರೂ ಅದು ತಪ್ಪಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ ನಗರ ಶಾಸಕ ಸಾರಾ ಮಹೇಶ್, ರೋಹಿಣಿ ಸಿಂಧೂರಿ ಅವರು 30 ಲಕ್ಷಕ್ಕೆ ಈಜು ಕೊಳ ನಿರ್ಮಾಣ ಮಾಡಿರುವುದು ಮತ್ತು 15 ಲಕ್ಷಕ್ಕೆ ಕಚೇರಿ ನವೀಕರಣ ಮಾಡಿರುವ ಬಗ್ಗೆ ಸದನದಲ್ಲಿ ಫೋಟೋ ತೋರಿಸಿ ವಿಧಾನಸಭೆಯ ಗಮನಸೆಳೆದರು.
ಶಾಸಕರ ಹಕ್ಕು, ನಗರಪಾಲಿಕೆ ಹಕ್ಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಯ ಹಕ್ಕನ್ನು ಮೊಟಕು ಮಾಡಿ ಅಧಿಕಾರಿ ಸರ್ವಾಧಿಕಾರಿಯಂತೆ ವರ್ತನೆ ಮಾಡಿದ್ದಾರೆ. ಕಾನೂನು ಬದ್ಧವಾಗಿ ಪ್ರಸ್ತಾಪ ಮಾಡಿದ ಕಾಮಗಾರಿ ಮತ್ತು ಅನುದಾನವನ್ನು ಬದಿಗೆ ಸರಿಸಿ ತಮಗೆ ಬೇಕಾದಂತೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಕೈಗೊಳ್ಳಬೇಕೆಂದು ಸಾ.ರಾ ಮಹೇಶ್ ಸರ್ಕಾರವನ್ನು ಆಗ್ರಹಪಡಿಸಿದರು.
sa ra mahesh lashes out at rohini sindhuri in assembly session just protocol violation from ias officer says jc madhu swamy
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm