ಬ್ರೇಕಿಂಗ್ ನ್ಯೂಸ್
26-09-21 12:26 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಲೇಖಾನ್ ಎಂಬಲ್ಲಿ ನಡೆದಿದ್ದು ಟ್ಯಾಂಕರ್ನಿಂದ ಪೆಟ್ರೋಲ್ ಸೋರಿಕೆಯಾಗಿ ಆತಂಕ ಸೃಷ್ಟಿಯಾಗಿದೆ.
ಮಂಗಳೂರಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಟ್ಯಾಂಕರ್ ಮಾಗುಂಡಿಗೆ ತೆರಳುತ್ತಿತ್ತು. ಟ್ಯಾಂಕರ್ ಚಾರ್ಮಾಡಿ ಘಾಟಿಯ ಅಲೇಖಾನ್ ಬಳಿಯಿಂದ ಘಾಟಿಯಲ್ಲಿ ತೆರಳುತ್ತಿದ್ದಂತೆ ಪಲ್ಟಿಯಾಗಿದೆ. ರಸ್ತೆಯ ಬದಿಗೆ ಉರುಳಿ ಬಿದ್ದು ಟ್ಯಾಂಕ್ ಸೋರಿಕೆಯಾಗಿದ್ದು ಪೆಟ್ರೋಲ್ ಸೋರಿಕೆಯಾಗುವುದಕ್ಕೆ ಆರಂಭವಾಗಿದೆ. ಟ್ಯಾಂಕರ್ನಲ್ಲಿ ಸುಮಾರು 8000 ಲೀಟರ್ ಪೆಟ್ರೋಲ್ ಹಾಗೂ 4000 ಲೀಟರ್ ಡಿಸೇಲ್ ಸಂಗ್ರಹವಿತ್ತು.

ಪೆಟ್ರೋಲ್ ಟ್ಯಾಂಕರ್ ಘಾಟಿಯ ಮತ್ತೊಂದು ಬದಿಗೆ ಪಲ್ಟಿಯಾಗಿದ್ದರೆ, ಪ್ರಪಾತಕ್ಕೆ ಉರುಳಿ ಬೀಳುವ ಸಾಧ್ಯತೆಯಿತ್ತು. ಆದರೆ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಣಕಲ್ ಠಾಣೆಯ ಪೊಲೀಸರು ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಚಾರ್ಮಾಡಿ ಘಾಟ್ ಕುಸಿತದಿಂದ ವಾಹನ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೇ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಇದೀಗ ಸಂಚಾರ ಆರಂಭವಾಗುತ್ತಲೇ ಟ್ಯಾಂಕರ್ ಪಲ್ಟಿಯಾಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಬಣಕಲ್ ಠಾಣೆಯ ಪೊಲೀಸರು ತೆರವು ಕಾರ್ಯ ನಡೆಸುತ್ತಿದ್ದಾರೆ.
Mangalore Petrol tanker truck topples in Charmadi ghat leakage causes panic. The fire service team are on the spot. Banakal police are also on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm