ಬ್ರೇಕಿಂಗ್ ನ್ಯೂಸ್
27-09-21 01:06 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.27: ಆರೆಸ್ಸೆಸ್ನಲ್ಲಿ ಯಾರು ಕೂಡ ದೇಶಭಕ್ತರೇ ಇಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸತ್ತವರೂ ಇಲ್ಲ. ಇವರು ಕೂಡ ತಾಲಿಬಾನಿಗಳಂತೆ ಕೈಯಲ್ಲಿ ದೊಣ್ಣೆ ಹಿಡಿದೇ ಬರುತ್ತಾರೆ, ಹುಷಾರಾಗಿರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಮಾಜಿ ಸಿಎಂ ಆರ್. ಗುಂಡೂರಾವ್ ಅವರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಿನಸಿ ಕಿಟ್ ವಿತರಿಸಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಸಂದರ್ಭದಲ್ಲಿ ವಂದೇ ಮಾತರಂ ಗೀತೆಯಿಂದ ದೂರ ಉಳಿದವರೆಲ್ಲ ಈಗ ಗೀತೆ ಹೇಳಲು ಆರಂಭಿಸಿದ್ದಾರೆ ಎಂದು ಕುಟುಕಿದ್ದಾರೆ.
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುವ ಬಿಜೆಪಿ ಪಕ್ಷವು ಇಸ್ಲಾಂ, ಕ್ರಿಸ್ತಿಯನ್ ಸಮುದಾಯದ ಒಬ್ಬರಿಗೂ ಕೇಂದ್ರ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಿಲ್ಲ. ಗಾಂಧಿ, ಅಂಬೇಡ್ಕರ್, ಪಟೇಲ್ ಅವರನ್ನು ದ್ವೇಷಿಸುತ್ತಿದ್ದ ಬಿಜೆಪಿಗೆ ಇದ್ದಕ್ಕಿದ್ದಂತೆ ಅವರ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಸರಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಸ್ಥಗಿತಗೊಳಿಸಿ ರಾಜ್ಯ ಬಿಜೆಪಿ ಸರಕಾರವು ಬಡವರ ಅನ್ನಕ್ಕೆ ಕಲ್ಲು ಹಾಕಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ. ಸುಳ್ಳನ್ನು ಉತ್ಪಾದಿಸಿ ಮಾರಾಟ ಮಾಡುತ್ತಾರೆ. ದಲಿತ, ಬಡವರ ಪರ ಗುಂಡೂ ರಾವ್ ಅವರಿಗಿದ್ದ ಕಾಳಜಿ ಎಲ್ಲರಿಗೂ ಮಾದರಿ. ಕೋವಿಡ್ ನಿಂದ ಮೃತಪಟ್ಟ ಎಲ್ಲರಿಗೂ ತಲಾ 10 ಸಾವಿರ ರೂಪಾಯಿ ಗುಂಡೂರಾವ್ ಫೌಂಡೇಷನ್ ನೀಡುತ್ತಿದೆ. ಈ ವರ್ಷದಲ್ಲೇ 30 ಸಾವಿರ ಆಹಾರ ಕಿಟ್ ಹಂಚಿದ್ದಾರೆ ಎಂದು ಶ್ಲಾಘಿಸಿದರು. ಮುಂದೆ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡವರಿಗೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ನೀಡುತ್ತೇವೆ ಎಂದರು.
ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು. ಅವರಲ್ಲಿ ಸ್ವಂತ ಶಕ್ತಿ ಇಲ್ಲ. ಹಣ, ಅಧಿಕಾರದ ಆಮಿಷವೊಡ್ಡಿ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ರೂ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದ್ರು. ಇದಕ್ಕೇ ಹೇಳೋದು 'ಮಾಡಿದ್ದುಣ್ಣೋ ಮಹರಾಯ' ಎಂದು. ಆರ್.ಎಸ್.ಎಸ್ ನವರು ತಮ್ಮನ್ನು ತಾವು ದೇಶಭಕ್ತರು ಅಂತ ಕರೆದುಕೊಳ್ತಾರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟ ಒಬ್ಬನೇ ಒಬ್ಬ ಆರ್.ಎಸ್.ಎಸ್ ನಾಯಕನ ಹೆಸರನ್ನು ಬಿಜೆಪಿ ನಾಯಕರು ಹೇಳಲಿ ನೋಡೋಣ ಎಂದು ಸವಾಲೆಸೆದರು.
ಇನ್ನು ಮಹಾತ್ಮ ಗಾಂಧಿ, ಬಿ.ಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗ್ತಾ ಇರಲಿಲ್ಲ, ಅವರ ಭಾವಚಿತ್ರವನ್ನೂ ತಮ್ಮ ಕಚೇರಿಗಳಲ್ಲಿ ಹಾಕುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರನ್ನು ಪ್ರೀತಿಸುವಂತೆ ನಾಟಕವಾಡಲು ಆರಂಭಿಸಿದ್ದಾರೆ. ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಎಲ್ಲಿಯವರೆಗೆ ಮೈತುಂಬಾ ಬಟ್ಟೆ ಮತ್ತು ಹೊಟ್ಟೆ ತುಂಬ ಅನ್ನ ಸಿಗುವುದಿಲ್ಲೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಹೇಳಿದ್ದರು. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ಬಿಜೆಪಿ ಸರ್ಕಾರ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದೆ. ಗಾಂಧೀಜಿಯವರನ್ನು ಗೌರವಿಸುವುದು ಎಂದರೆ ಅವರ ಭಾವಚಿತ್ರಕ್ಕೆ ಪೂಜೆ ಮಾಡುವುದಲ್ಲ. ಅವರ ಚಿಂತನೆಗಳ ಪಾಲನೆ ಹಾಗೂ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡಲು ಶ್ರಮಿಸುವುದು ಎಂಬುದನ್ನು ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದರು.
Senior Congress leader Siddaramaiah on Sunday alleged that BJP are “Talibanis” and also claimed that it’s actually the RSS which is running the administration in Karnataka.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm