ಬ್ರೇಕಿಂಗ್ ನ್ಯೂಸ್
29-09-21 03:31 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ. 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್ಡೌನ್ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು.
No Fee Hike for Engineering says Minister Ashwath Narayan.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm