ಬ್ರೇಕಿಂಗ್ ನ್ಯೂಸ್
            
                        29-09-21 03:31 pm Headline Karnataka News Network ಕರ್ನಾಟಕ
            ಬೆಂಗಳೂರು, ಸೆ. 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್ಡೌನ್ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು.
            
            
            No Fee Hike for Engineering says Minister Ashwath Narayan.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm