ಬ್ರೇಕಿಂಗ್ ನ್ಯೂಸ್
29-09-21 03:31 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ. 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್ಡೌನ್ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ನಡೆದ ಸಭೆಯಲ್ಲಿಯೂ ಸಹ ಚರ್ಚಿಸಿ, ಶುಲ್ಕ ಹೆಚ್ಚಳ ಮಾಡದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಒದಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವ್ಯವಸ್ಥಿತವಾದ ಕೌನ್ಸೆಲಿಂಗ್ ನಡೆಸಲಾಗುವುದು. ಆದರೆ, ಇದಕ್ಕೂ ಮುನ್ನ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ನಡೆಸಲಾದ ನೀಟ್ ಪರೀಕ್ಷೆಯ ಕೌನ್ಸೆಲಿಂಗ್ ಗಮನಿಸಿ ಸಿಇಟಿ ಕೌನ್ಸೆಲಿಂಗ್ ಏರ್ಪಡಿಸುತ್ತೇವೆ. ಕಾರಣ ಸಿಇಟಿ ಕೌನ್ಸೆಲಿಂಗ್ ನಲ್ಲಿ ಎಂಜಿನಿಯರಿಂಗ್ ಸೀಟು ಪಡೆದ ವಿದ್ಯಾರ್ಥಿಗಳು ಮೆಡಿಕಲ್ ಸೀಟ್ ಸಿಕ್ಕರೆ ಇಂಜಿನಿಯರಿಂಗ್ ರದ್ದು ಮಾಡಿ ಮೆಡಿಕಲ್ ಗೆ ತೆರಳುತ್ತಾರೆ. ಈ ಗೊಂದಲ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಇಟಿ ರ್ಯಾಂಕ್ ಮೂಲಕ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಸಹ ಕೌಶಲ ತರಬೇತಿ ಹೆಸರಿನಲ್ಲಿ ಶುಲ್ಕ ಪಡೆಯಲಾಗುತ್ತದೆ. ಆದರೆ, ಈ ಶುಲ್ಕ ವರ್ಷಕ್ಕೆ 20,000 ಮೀರಬಾರದು ಎಂದು ಖಾಸಗಿ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಖಾಸಗಿ ಕಾಲೇಜುಗಳಲ್ಲಿ ವಾರ್ಷಿಕವಾಗಿ ಪಡೆಯುವ ಎಲ್ಲ ರೀತಿಯ ಶುಲ್ಕಗಳ ಬಗ್ಗೆ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮೊದಲೇ ತಿಳಿಸಬೇಕು ಎಂದೂ ಸೂಚಿಸಲಾಗಿದೆ ಎಂದರು.
No Fee Hike for Engineering says Minister Ashwath Narayan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm