ಬ್ರೇಕಿಂಗ್ ನ್ಯೂಸ್
30-09-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.30 : ಬಿಬಿಎಂಪಿ ಅಧಿಕಾರಿಗಳು ಕಡೆಗೂ ದಂಡ ಪ್ರಯೋಗ ಮಾಡಿದ್ದಾರೆ. 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಷ್ಠಿತ ಮಂತ್ರಿ ಮಾಲ್ ಕಟ್ಟಡಕ್ಕೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿರಲಿಲ್ಲ. ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ತೆರಿಗೆ ಪಾವತಿಯಾಗದ ಕಾರಣ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ಚಿಮ ಡಿಸಿಪಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದಾರೆ
2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. ಬಳಿಕ 5 ಕೋಟಿ ರೂ. ಪಾವತಿಸಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರು. ಆದರೆ, ಸೆಪ್ಟೆಂಬರ್ ಒಳಗಡೆ ತೆರಿಗೆ ಪಾವತಿಸದಿದ್ದರೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.

ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಾ ಬಂದಿದೆ. ಆದರೆ, 2017ರಿಂದ ಇದುವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿತ್ತು. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
Malleshwaram Mantri Mall Fails to Pay Property Tax BBMP Officilas Close the Mall.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm