ಬ್ರೇಕಿಂಗ್ ನ್ಯೂಸ್
            
                        30-09-21 03:01 pm Headline Karnataka News Network ಕರ್ನಾಟಕ
            ಬೆಂಗಳೂರು, ಸೆ.30 : ಬಿಬಿಎಂಪಿ ಅಧಿಕಾರಿಗಳು ಕಡೆಗೂ ದಂಡ ಪ್ರಯೋಗ ಮಾಡಿದ್ದಾರೆ. 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಷ್ಠಿತ ಮಂತ್ರಿ ಮಾಲ್ ಕಟ್ಟಡಕ್ಕೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿರಲಿಲ್ಲ. ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ತೆರಿಗೆ ಪಾವತಿಯಾಗದ ಕಾರಣ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ಚಿಮ ಡಿಸಿಪಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದಾರೆ
2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. ಬಳಿಕ 5 ಕೋಟಿ ರೂ. ಪಾವತಿಸಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರು. ಆದರೆ, ಸೆಪ್ಟೆಂಬರ್ ಒಳಗಡೆ ತೆರಿಗೆ ಪಾವತಿಸದಿದ್ದರೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.

ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಾ ಬಂದಿದೆ. ಆದರೆ, 2017ರಿಂದ ಇದುವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿತ್ತು. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
            
            
            Malleshwaram Mantri Mall Fails to Pay Property Tax BBMP Officilas Close the Mall.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm