ಬ್ರೇಕಿಂಗ್ ನ್ಯೂಸ್
30-09-21 03:01 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.30 : ಬಿಬಿಎಂಪಿ ಅಧಿಕಾರಿಗಳು ಕಡೆಗೂ ದಂಡ ಪ್ರಯೋಗ ಮಾಡಿದ್ದಾರೆ. 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರತಿಷ್ಠಿತ ಮಂತ್ರಿ ಮಾಲ್ ಕಟ್ಟಡಕ್ಕೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿರಲಿಲ್ಲ. ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ತೆರಿಗೆ ಪಾವತಿಯಾಗದ ಕಾರಣ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ಚಿಮ ಡಿಸಿಪಿ ಪ್ರಸನ್ನ ಕುಮಾರ್ ಮಾಹಿತಿ ನೀಡಿದ್ದಾರೆ
2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. ಬಳಿಕ 5 ಕೋಟಿ ರೂ. ಪಾವತಿಸಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರು. ಆದರೆ, ಸೆಪ್ಟೆಂಬರ್ ಒಳಗಡೆ ತೆರಿಗೆ ಪಾವತಿಸದಿದ್ದರೆ ಬೀಗ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು.

ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಾ ಬಂದಿದೆ. ಆದರೆ, 2017ರಿಂದ ಇದುವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿತ್ತು. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
Malleshwaram Mantri Mall Fails to Pay Property Tax BBMP Officilas Close the Mall.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm