ಬ್ರೇಕಿಂಗ್ ನ್ಯೂಸ್
01-10-21 11:12 am Headline Karnataka News Network ಕರ್ನಾಟಕ
ಬೆಂಗಳೂರು, ಅ.1 : ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರಕಾರ 2016 ರಲ್ಲಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕ ಸದಸ್ಯ ಪೀಠವು ಈ ಆದೇಶ ಮಾಡಿದೆ.
ಹೊಸ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲು ಅರ್ಜಿಯಲ್ಲಿ 6ನೇ ಪ್ರತಿವಾದಿಯಾಗಿರುವ ಬಾಳಿಗಾ ಸಹೋದರಿ ಅನುರಾಧಾ ಬಾಳಿಗಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ಮುಕ್ತ ಅವಕಾಶ ಹೊಂದಿದ್ದಾರೆ. ಒಂದೊಮ್ಮೆ ಬಾಳಿಗಾ ಸಹೋದರಿ ಅನುರಾಧಾ ಮನವಿ ಸಲ್ಲಿಸಿದರೆ, ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠ ನಿರ್ದೇಶಿಸಿದೆ.

ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು 2016ರ ಮಾ.21ರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿ 2016ರ ಡಿ.21ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ನ್ಯಾಯಾಲಯಗಳಲ್ಲಿ ದೂರುದಾರರ ಪರವಾಗಿ ಮತ್ತು ಮೃತ ಕುಟುಂಬದವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಲ್ಲಿ ರವೀಂದ್ರನಾಥ್ ಕಾಮತ್ ವಾದ ಮಂಡಿಸಿದ್ದಾರೆ. ಕೊಲೆಯ ನಂತರ ನಡೆದ ಹಲವು ಪ್ರತಿಭಟನೆಗಳಲ್ಲಿ ಕಾಮತ್ ಭಾಗವಹಿಸಿದ್ದರು. ಮೃತರ ತಂದೆ ನಡೆಸಿದ ಸುದ್ದಿಗೋಷ್ಠಿಯಲ್ಲೂ ಪಾಲ್ಗೊಂಡು ನನ್ನ ವಿರುದ್ಧ ಹೇಳಿಕೆ ನೀಡಿದ್ದರು. ಮೃತನ ಕುಟುಂಬದವರ ಮನವಿ ಮೇರೆಗೆ ರವೀಂದ್ರನಾಥ್ ಅವರನ್ನೇ ಎಸ್ಪಿಪಿಯಾಗಿ ನೇಮಿಸಲಾಗಿದೆ. ಹೀಗಾಗಿ, ಕಾಮತ್ ಎಸ್ಪಿಪಿಯಾಗಿ ಮುಂದುವರಿದರೆ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಆರೋಪಿ ನರೇಶ್ ಶೆಣೈ ಕೋರಿದ್ದರು.
RTI Activist Vinayak Baliga killing Karntaka HC Orders for Removal of SSP Ravindranath Kamath
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm