ಬ್ರೇಕಿಂಗ್ ನ್ಯೂಸ್
01-10-21 11:12 am Headline Karnataka News Network ಕರ್ನಾಟಕ
ಬೆಂಗಳೂರು, ಅ.1 : ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರಕಾರಿ ಅಭಿಯೋಜಕರನ್ನಾಗಿ (ಎಸ್ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿದ್ದ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರಕಾರ 2016 ರಲ್ಲಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕ ಸದಸ್ಯ ಪೀಠವು ಈ ಆದೇಶ ಮಾಡಿದೆ.
ಹೊಸ ವಿಶೇಷ ಸರಕಾರಿ ಅಭಿಯೋಜಕರನ್ನು ನೇಮಿಸಲು ಅರ್ಜಿಯಲ್ಲಿ 6ನೇ ಪ್ರತಿವಾದಿಯಾಗಿರುವ ಬಾಳಿಗಾ ಸಹೋದರಿ ಅನುರಾಧಾ ಬಾಳಿಗಾ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ಮುಕ್ತ ಅವಕಾಶ ಹೊಂದಿದ್ದಾರೆ. ಒಂದೊಮ್ಮೆ ಬಾಳಿಗಾ ಸಹೋದರಿ ಅನುರಾಧಾ ಮನವಿ ಸಲ್ಲಿಸಿದರೆ, ಅರ್ಜಿಯನ್ನು ಕಾನೂನು ಪ್ರಕಾರ ಪರಿಗಣಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠ ನಿರ್ದೇಶಿಸಿದೆ.

ಮಂಗಳೂರಿನ ಕೊಡಿಯಾಲ್ ಬೈಲ್ನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರನ್ನು 2016ರ ಮಾ.21ರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ರವೀಂದ್ರನಾಥ್ ಕಾಮತ್ ಅವರನ್ನು ನೇಮಿಸಿ 2016ರ ಡಿ.21ರಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು.

ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲಿನಿಂದಲೂ ನ್ಯಾಯಾಲಯಗಳಲ್ಲಿ ದೂರುದಾರರ ಪರವಾಗಿ ಮತ್ತು ಮೃತ ಕುಟುಂಬದವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳಲ್ಲಿ ರವೀಂದ್ರನಾಥ್ ಕಾಮತ್ ವಾದ ಮಂಡಿಸಿದ್ದಾರೆ. ಕೊಲೆಯ ನಂತರ ನಡೆದ ಹಲವು ಪ್ರತಿಭಟನೆಗಳಲ್ಲಿ ಕಾಮತ್ ಭಾಗವಹಿಸಿದ್ದರು. ಮೃತರ ತಂದೆ ನಡೆಸಿದ ಸುದ್ದಿಗೋಷ್ಠಿಯಲ್ಲೂ ಪಾಲ್ಗೊಂಡು ನನ್ನ ವಿರುದ್ಧ ಹೇಳಿಕೆ ನೀಡಿದ್ದರು. ಮೃತನ ಕುಟುಂಬದವರ ಮನವಿ ಮೇರೆಗೆ ರವೀಂದ್ರನಾಥ್ ಅವರನ್ನೇ ಎಸ್ಪಿಪಿಯಾಗಿ ನೇಮಿಸಲಾಗಿದೆ. ಹೀಗಾಗಿ, ಕಾಮತ್ ಎಸ್ಪಿಪಿಯಾಗಿ ಮುಂದುವರಿದರೆ ನಿಷ್ಪಕ್ಷಪಾತ ವಿಚಾರಣೆ ಸಾಧ್ಯವಿಲ್ಲ. ಆದ್ದರಿಂದ, ಅವರ ನೇಮಕಾತಿ ರದ್ದುಪಡಿಸಬೇಕು ಎಂದು ಆರೋಪಿ ನರೇಶ್ ಶೆಣೈ ಕೋರಿದ್ದರು.
RTI Activist Vinayak Baliga killing Karntaka HC Orders for Removal of SSP Ravindranath Kamath
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm