ಬ್ರೇಕಿಂಗ್ ನ್ಯೂಸ್
01-10-21 02:55 pm Headline Karnataka News Network ಕರ್ನಾಟಕ
ಮಂಗಳೂರು, ಅ.1: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವುದರಿಂದ ಆರನೇ ತರಗತಿಯಿಂದ ಮೇಲ್ಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಸಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಪದಾಧಿಕಾರಿಗಳು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇದರಂತೆ, ರಾಜ್ಯದಾದ್ಯಂತ ಬಹುತೇಕ ಶಾಲೆಗಳಲ್ಲಿ 6ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಪೂರ್ಣಾವಧಿ ತರಗತಿಯನ್ನು ಇಂದಿನಿಂದಲೇ ಆರಂಭಿಸಲಾಗಿದೆ ಎಂದು ರುಪ್ಸಾ ಸಂಘಟನೆಯ ಉಪಾಧ್ಯಕ್ಷ ಡಾ.ಮಂಜುನಾಥ ರೇವಣಕರ್ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಒಂದು ವಾರದೊಳಗೆ 3ರಿಂದ 5ನೇ ಕ್ಲಾಸ್ ವಿದ್ಯಾರ್ಥಿಗಳಿಗೂ ದಿನ ಪೂರ್ತಿ ಶಾಲೆ ಆರಂಭಿಸಲು ಶಿಕ್ಷಣ ಸಚಿವರು ಒಪ್ಪಿಗೆ ನೀಡಿದ್ದಾರೆ. ದಸರಾ ಬಳಿಕ 1 ಮತ್ತು 2ನೇ ಕ್ಲಾಸ್ ವಿದ್ಯಾರ್ಥಿಗಳಿಗೂ ಶಾಲೆ ಆರಂಭಿಸುವ ಬಗ್ಗೆ ಅಧಿಕೃತ ಆದೇಶ ನೀಡುವುದಾಗಿ ಸಚಿವ ನಾಗೇಶ್ ತಿಳಿಸಿದ್ದಾಗಿ ಮಂಜುನಾಥ್ ರೇವಣಕರ್ ಹೇಳಿದ್ದಾರೆ. 5ನೇ ತರಗತಿಯಿಂದ ಕೆಳಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಗೊಂಡಲ್ಲಿ ಕೊರೊನಾ ಸೋಂಕು ಕಂಡುಬಂದ ಎರಡು ವರ್ಷಗಳ ಬಳಿಕ ಮತ್ತೆ ಶಾಲೆ ಯಥಾಸ್ಥಿತಿಗೆ ಬಂದಂತಾಗಲಿದೆ.


ಶಾಲಾ ಬಸ್ ಗಳಿಗೆ 20 ವರ್ಷಕ್ಕೆ ವಿನಾಯ್ತಿ
ಇದೇ ವೇಳೆ, ರುಪ್ಸಾ ಸಂಘಟನೆಯ ವತಿಯಿಂದ 15 ವರ್ಷ ಮೀರಿದ ಬಸ್ಸುಗಳನ್ನು ಗುಜರಿಗೆ ಹಾಕಬೇಕೆಂಬ ಕೇಂದ್ರ ಸರಕಾರದ ಆದೇಶಕ್ಕೆ ಶಾಲೆಗಳ ಬಸ್ಸುಗಳಿಗೆ ವಿನಾಯ್ತಿ ನೀಡಬೇಕೆಂದು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. 15 ವರ್ಷ ಮೀರಿದ ಶಾಲಾ ಬಸ್ ಗಳನ್ನು ಉಪಯೋಗಿಸಲು ಆರ್ ಟಿಓ ಅಧಿಕಾರಿಗಳು ಬಿಡುತ್ತಿಲ್ಲ. ಶಾಲಾ ಬಸ್ ಗಳು ದಿನಕ್ಕೆ ಕೇವಲ 20ರಿಂದ 30 ಕಿಮೀ ಅಷ್ಟೇ ಓಡುತ್ತವೆ. ಕೊನೆಪಕ್ಷ ಶಾಲಾ ಬಸ್ ಗಳಿಗೆ 25 ವರ್ಷ ಓಡಾಟಕ್ಕೆ ಅನುಮತಿ ನೀಡಬೇಕೆಂದು ಸಚಿವ ಶ್ರೀರಾಮುಲು ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಮನವಿಯನ್ನು ಪರಿಗಣಿಸಿದ ಸಚಿವರು ಶಾಲಾ ಬಸ್ ಗಳಿಗೆ ಮಾತ್ರ ಕನಿಷ್ಠ 15ರಿಂದ 20 ವರ್ಷಕ್ಕೆ ವಿನಾಯ್ತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ರಾಜ್ಯದ 31 ಜಿಲ್ಲೆಗಳ 1 ಲಕ್ಷ 85 ಸಾವಿರ ಶಾಲೆಗಳಿಗೆ ಅನುಕೂಲವಾಗಲಿದೆ ಎಂದು ರುಪ್ಸಾ ಸಂಘಟನೆ ಹೇಳಿದೆ.
Mangalore Corona fear goes away schools to reopen high schools to have full class. 3rd standard to 5th Std classes to commence in a week.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm