ಬ್ರೇಕಿಂಗ್ ನ್ಯೂಸ್
01-10-21 02:55 pm Headline Karnataka News Network ಕರ್ನಾಟಕ
ಮಂಗಳೂರು, ಅ.1: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವುದರಿಂದ ಆರನೇ ತರಗತಿಯಿಂದ ಮೇಲ್ಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಸಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಪದಾಧಿಕಾರಿಗಳು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇದರಂತೆ, ರಾಜ್ಯದಾದ್ಯಂತ ಬಹುತೇಕ ಶಾಲೆಗಳಲ್ಲಿ 6ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಪೂರ್ಣಾವಧಿ ತರಗತಿಯನ್ನು ಇಂದಿನಿಂದಲೇ ಆರಂಭಿಸಲಾಗಿದೆ ಎಂದು ರುಪ್ಸಾ ಸಂಘಟನೆಯ ಉಪಾಧ್ಯಕ್ಷ ಡಾ.ಮಂಜುನಾಥ ರೇವಣಕರ್ ಮಾಹಿತಿ ನೀಡಿದ್ದಾರೆ.
ಇದಲ್ಲದೆ, ಒಂದು ವಾರದೊಳಗೆ 3ರಿಂದ 5ನೇ ಕ್ಲಾಸ್ ವಿದ್ಯಾರ್ಥಿಗಳಿಗೂ ದಿನ ಪೂರ್ತಿ ಶಾಲೆ ಆರಂಭಿಸಲು ಶಿಕ್ಷಣ ಸಚಿವರು ಒಪ್ಪಿಗೆ ನೀಡಿದ್ದಾರೆ. ದಸರಾ ಬಳಿಕ 1 ಮತ್ತು 2ನೇ ಕ್ಲಾಸ್ ವಿದ್ಯಾರ್ಥಿಗಳಿಗೂ ಶಾಲೆ ಆರಂಭಿಸುವ ಬಗ್ಗೆ ಅಧಿಕೃತ ಆದೇಶ ನೀಡುವುದಾಗಿ ಸಚಿವ ನಾಗೇಶ್ ತಿಳಿಸಿದ್ದಾಗಿ ಮಂಜುನಾಥ್ ರೇವಣಕರ್ ಹೇಳಿದ್ದಾರೆ. 5ನೇ ತರಗತಿಯಿಂದ ಕೆಳಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಗೊಂಡಲ್ಲಿ ಕೊರೊನಾ ಸೋಂಕು ಕಂಡುಬಂದ ಎರಡು ವರ್ಷಗಳ ಬಳಿಕ ಮತ್ತೆ ಶಾಲೆ ಯಥಾಸ್ಥಿತಿಗೆ ಬಂದಂತಾಗಲಿದೆ.
ಶಾಲಾ ಬಸ್ ಗಳಿಗೆ 20 ವರ್ಷಕ್ಕೆ ವಿನಾಯ್ತಿ
ಇದೇ ವೇಳೆ, ರುಪ್ಸಾ ಸಂಘಟನೆಯ ವತಿಯಿಂದ 15 ವರ್ಷ ಮೀರಿದ ಬಸ್ಸುಗಳನ್ನು ಗುಜರಿಗೆ ಹಾಕಬೇಕೆಂಬ ಕೇಂದ್ರ ಸರಕಾರದ ಆದೇಶಕ್ಕೆ ಶಾಲೆಗಳ ಬಸ್ಸುಗಳಿಗೆ ವಿನಾಯ್ತಿ ನೀಡಬೇಕೆಂದು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. 15 ವರ್ಷ ಮೀರಿದ ಶಾಲಾ ಬಸ್ ಗಳನ್ನು ಉಪಯೋಗಿಸಲು ಆರ್ ಟಿಓ ಅಧಿಕಾರಿಗಳು ಬಿಡುತ್ತಿಲ್ಲ. ಶಾಲಾ ಬಸ್ ಗಳು ದಿನಕ್ಕೆ ಕೇವಲ 20ರಿಂದ 30 ಕಿಮೀ ಅಷ್ಟೇ ಓಡುತ್ತವೆ. ಕೊನೆಪಕ್ಷ ಶಾಲಾ ಬಸ್ ಗಳಿಗೆ 25 ವರ್ಷ ಓಡಾಟಕ್ಕೆ ಅನುಮತಿ ನೀಡಬೇಕೆಂದು ಸಚಿವ ಶ್ರೀರಾಮುಲು ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಮನವಿಯನ್ನು ಪರಿಗಣಿಸಿದ ಸಚಿವರು ಶಾಲಾ ಬಸ್ ಗಳಿಗೆ ಮಾತ್ರ ಕನಿಷ್ಠ 15ರಿಂದ 20 ವರ್ಷಕ್ಕೆ ವಿನಾಯ್ತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ರಾಜ್ಯದ 31 ಜಿಲ್ಲೆಗಳ 1 ಲಕ್ಷ 85 ಸಾವಿರ ಶಾಲೆಗಳಿಗೆ ಅನುಕೂಲವಾಗಲಿದೆ ಎಂದು ರುಪ್ಸಾ ಸಂಘಟನೆ ಹೇಳಿದೆ.
Mangalore Corona fear goes away schools to reopen high schools to have full class. 3rd standard to 5th Std classes to commence in a week.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am