ಬ್ರೇಕಿಂಗ್ ನ್ಯೂಸ್
01-10-21 02:55 pm Headline Karnataka News Network ಕರ್ನಾಟಕ
ಮಂಗಳೂರು, ಅ.1: ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿರುವುದರಿಂದ ಆರನೇ ತರಗತಿಯಿಂದ ಮೇಲ್ಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿ ನಡೆಸಲು ಶಿಕ್ಷಣ ಸಚಿವರು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾನ್ಯತೆ ಪಡೆದ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಪದಾಧಿಕಾರಿಗಳು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇದರಂತೆ, ರಾಜ್ಯದಾದ್ಯಂತ ಬಹುತೇಕ ಶಾಲೆಗಳಲ್ಲಿ 6ನೇ ತರಗತಿಯಿಂದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಪೂರ್ಣಾವಧಿ ತರಗತಿಯನ್ನು ಇಂದಿನಿಂದಲೇ ಆರಂಭಿಸಲಾಗಿದೆ ಎಂದು ರುಪ್ಸಾ ಸಂಘಟನೆಯ ಉಪಾಧ್ಯಕ್ಷ ಡಾ.ಮಂಜುನಾಥ ರೇವಣಕರ್ ಮಾಹಿತಿ ನೀಡಿದ್ದಾರೆ.

ಇದಲ್ಲದೆ, ಒಂದು ವಾರದೊಳಗೆ 3ರಿಂದ 5ನೇ ಕ್ಲಾಸ್ ವಿದ್ಯಾರ್ಥಿಗಳಿಗೂ ದಿನ ಪೂರ್ತಿ ಶಾಲೆ ಆರಂಭಿಸಲು ಶಿಕ್ಷಣ ಸಚಿವರು ಒಪ್ಪಿಗೆ ನೀಡಿದ್ದಾರೆ. ದಸರಾ ಬಳಿಕ 1 ಮತ್ತು 2ನೇ ಕ್ಲಾಸ್ ವಿದ್ಯಾರ್ಥಿಗಳಿಗೂ ಶಾಲೆ ಆರಂಭಿಸುವ ಬಗ್ಗೆ ಅಧಿಕೃತ ಆದೇಶ ನೀಡುವುದಾಗಿ ಸಚಿವ ನಾಗೇಶ್ ತಿಳಿಸಿದ್ದಾಗಿ ಮಂಜುನಾಥ್ ರೇವಣಕರ್ ಹೇಳಿದ್ದಾರೆ. 5ನೇ ತರಗತಿಯಿಂದ ಕೆಳಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭಗೊಂಡಲ್ಲಿ ಕೊರೊನಾ ಸೋಂಕು ಕಂಡುಬಂದ ಎರಡು ವರ್ಷಗಳ ಬಳಿಕ ಮತ್ತೆ ಶಾಲೆ ಯಥಾಸ್ಥಿತಿಗೆ ಬಂದಂತಾಗಲಿದೆ.


ಶಾಲಾ ಬಸ್ ಗಳಿಗೆ 20 ವರ್ಷಕ್ಕೆ ವಿನಾಯ್ತಿ
ಇದೇ ವೇಳೆ, ರುಪ್ಸಾ ಸಂಘಟನೆಯ ವತಿಯಿಂದ 15 ವರ್ಷ ಮೀರಿದ ಬಸ್ಸುಗಳನ್ನು ಗುಜರಿಗೆ ಹಾಕಬೇಕೆಂಬ ಕೇಂದ್ರ ಸರಕಾರದ ಆದೇಶಕ್ಕೆ ಶಾಲೆಗಳ ಬಸ್ಸುಗಳಿಗೆ ವಿನಾಯ್ತಿ ನೀಡಬೇಕೆಂದು ರಾಜ್ಯ ಸಾರಿಗೆ ಸಚಿವರನ್ನು ಭೇಟಿಯಾಗಿ ಸಂಘಟನೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. 15 ವರ್ಷ ಮೀರಿದ ಶಾಲಾ ಬಸ್ ಗಳನ್ನು ಉಪಯೋಗಿಸಲು ಆರ್ ಟಿಓ ಅಧಿಕಾರಿಗಳು ಬಿಡುತ್ತಿಲ್ಲ. ಶಾಲಾ ಬಸ್ ಗಳು ದಿನಕ್ಕೆ ಕೇವಲ 20ರಿಂದ 30 ಕಿಮೀ ಅಷ್ಟೇ ಓಡುತ್ತವೆ. ಕೊನೆಪಕ್ಷ ಶಾಲಾ ಬಸ್ ಗಳಿಗೆ 25 ವರ್ಷ ಓಡಾಟಕ್ಕೆ ಅನುಮತಿ ನೀಡಬೇಕೆಂದು ಸಚಿವ ಶ್ರೀರಾಮುಲು ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ಮನವಿಯನ್ನು ಪರಿಗಣಿಸಿದ ಸಚಿವರು ಶಾಲಾ ಬಸ್ ಗಳಿಗೆ ಮಾತ್ರ ಕನಿಷ್ಠ 15ರಿಂದ 20 ವರ್ಷಕ್ಕೆ ವಿನಾಯ್ತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ರಾಜ್ಯದ 31 ಜಿಲ್ಲೆಗಳ 1 ಲಕ್ಷ 85 ಸಾವಿರ ಶಾಲೆಗಳಿಗೆ ಅನುಕೂಲವಾಗಲಿದೆ ಎಂದು ರುಪ್ಸಾ ಸಂಘಟನೆ ಹೇಳಿದೆ.
Mangalore Corona fear goes away schools to reopen high schools to have full class. 3rd standard to 5th Std classes to commence in a week.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm