ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm